ಯೇಗ ದಾಗೆಲ್ಲಾ ಐತೆ ಪುಸ್ತಕದಿಂದ ಪ್ರೇರಣೆ ಪಡೆದಿರುವ ಓದುಗ ಬಂಧುಗಳೇ, ಅವಧೂತರಾದ ಮುಕುಂದೂರು ಸ್ವಾಮಿಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಕಾತುರ, ಅವರ ವಿಚಾರದ ಪ್ರಚಾರ ಮಾಡುವ ಉದ್ಧೇಶದಿಂದ ನಾವು ಕೆಲವು ಮಿತ್ರರು ನಮ್ಮ ಹುಡುಕಾಟ ಆರಂಭಿಸಿದ್ದೇವೆ. ಮೊದಲನೆಯ ಹಂತವಾಗಿ ಅರಸೀಕೆರೆ ಸಮೀಪದ ಆಶ್ರಮಕ್ಕೆ ಭೇಟಿಕೊಟ್ಟು ಕೆಲವರನ್ನು ಮಾತನಾಡಿಸಿರುವ ಬಗ್ಗೆ ಈಗಾಗಲೆ ವರದಿಮಾಡಲಾಗಿದೆ. ಮುಂದಿನ ಹೆಜ್ಜೆಯಾಗಿ ಮುಕುಂದೂರು ಸ್ವಾಮಿಗಳನ್ನು ಬಹಳ ಹತ್ತಿರದಿಂದ ಬಲ್ಲವರೂ, ಅವರ ಬಗ್ಗೆ " ಯೇಗ ದಾಗೆಲ್ಲಾ ಐತೆ" ಪುಸ್ತಕವನ್ನು ಬರೆದು ನಮ್ಮಲ್ಲಿ ಪ್ರೇರಣೆ ನೀಡಿರುವ ವಯೋ ವೃದ್ಧರಾದ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳನ್ನು ಭೇಟಿಮಾಡಲು ಉದ್ಧೇಶಿಸಲಾಗಿದೆ. ಪೂಜ್ಯರನ್ನು ಭೇಟಿ ಮಾಡಲು ದೂರವಾಣಿ ಮೂಲಕ ವಿನಂತಿಸಿ ಅನುಮತಿ ಪಡೆಯಲಾಗಿದೆ. ಪೂಜ್ಯರನ್ನು ಭೇಟಿಮಾಡಬಯಸುವವರು ನಮ್ಮೊಡನೆ ಸೇರಬಹುದು.
ಭೇಟಿಯ ಸಮಯ: 8.7.2012 ಭಾನುವಾರ ಸಂಜೆ 5.00 ಗಂಟೆಗೆ ಅವರ ಮನೆಯಲ್ಲಿ.
ವಿಳಾಸ:
ಶ್ರೀ ರವಿಬೆಳಗೆರೆಯವರ ನಿವಾಸ
ಶೃತಿ ಬೇಕರಿ ಹತ್ತಿರ
24ನೇ ಕ್ರಾಸ್
ಕೆ.ಆರ್.ರಸ್ತೆ
ಬೆಂಗಳೂರು
ಸಂಪರ್ಕಿಸಲು ನನ್ನ ಮೊಬೈಲ್ ನಂಬರ್: 9663572406
No comments:
Post a Comment